Difference between revisions 856095 and 856096 on knwiki=== ಭೂಮಿಯ ಪವಿತ್ರತೆ === ರಾಮಾಯಣದಲ್ಲಿ ಭೂಮಿ == ಸೀತಾ ಪರಿತ್ಯಾಗ == ಶ್ರೀರಾಮನ ಆಳ್ವಿಕೆಯಲ್ಲಿ ಅಯೋಧ್ಯೆಯಲ್ಲಿ ಸುಖ, ಸಮೃದ್ಧಿಗಳು ನೆಲಸಿದ್ದವು. ಪ್ರಜೆಗಳು ಆನಂದದಿಂದಿದ್ದರು. ಆದರೆ ಈ ನೆಮ್ಮದಿ ಶಾಶ್ವತವಾಗಿ ಉಳಿಯಲಿಲ್ಲ. ರಾವಣನ ಸೆರೆಯಲ್ಲಿ ಬಹಳ ಕಾಲವಿದ್ದ ಸೀತೆಯ ಪಾವಿತ್ರ್ಯದ ಬಗೆಗೆ ಜನರು ಅನುಮಾನದಿಂದ ಮಾತಾಡ ತೊಡಗಿದರು. ಈ ವಿಷಯ ಗೂಢಚಾರರಿಂದ ರಾಮನಿಗೂ ತಿಳಿದು ಬಂದಿತು. ರಾಜ್ಯದಲ್ಲಿ ಉಂಟಾದ ಬರಗಾಲಕ್ಕೂ ಸೀತೆಯಿಂದಾಗಿರುವ ತಪ್ಪೇ ಕಾರಣವೆಂದು ಜನ ಗುಸುಗುಸು ಮಾತಾಡ ತೊಡಗಿದರು. ತನ್ನ ಪ್ರಜೆಗಳನ್ನು ಸಂತೋಷ ಪಡಿಸಲು ರಾಮ ಸೀತೆಯನ್ನು ತ್ಯಜಿಸಲು ನಿರ್ಧರಿಸಿದನು. ಸೀತೆಯು ವನವಾಸ ಕಾಲದಲ್ಲಿ ರಾಮನೊಡನೆ ಸಂತೋಷದಿಂದ ಕಾಲಕಳೆದ(contracted; show full)ಾಯಿ ಬಿಡುತ್ತದೆ. ಅಲ್ಲಿ ಸೀತೆಗಾಗಿ ಸಿಂಹಾಸನವೊಂದು ಪ್ರತ್ಯಕ್ಷವಾಗುತ್ತದೆ. ಸೀತೆಯ ತಾಯಿಯಾದ ಭೂದೇವಿಯು ತನ್ನ ಮಗಳನ್ನು ಅಪ್ಪಿಕೊಂಡು ಭೂಮಿ ಒಳಗೆ ಕರೆದುಕೊಂಡು ಹೋಗುತ್ತಿದ್ದಂತೆ ಭೂಮಿ ಮುಚ್ಚಿಕೊಳ್ಳುತ್ತದೆ. ಈ ದೃಶ್ಯವನ್ನು ಕಂಡು ರಾಮ ಸೀತೆಯನ್ನು ಅನುಮಾನಿಸಿದ್ದಕ್ಕಾಗಿ ಪಶ್ಚಾತ್ತಾಪ ಪಡುತ್ತಾನೆ. ಆಗ ಮುನಿಗಳು ರಾವಣನ ಸಂಹಾರದ ನಿಮಿತ್ತಕ್ಕಾಗಿ ಸೀತೆಯ ಅವತಾರವಾಗಿತ್ತು. ತನ್ನ ಕಾರ್ಯ ಮುಗಿದಿದ್ದರಿಂದ ಅವಳು ಹೋಗಿದ್ದಾಳೆ. ನೀನು ದುಃಖಿಸಬೇಡ ಎಂದು ರಾಮನನ್ನು ಸಮಾಧಾನಿಸುತ್ತಾರೆ. ಹೀಗೇ ಭೂಮಿಯಮೇಲಿನ ಜನರು ರಾಮಾಯಣ ಕಾಲದಿಂದಲೂ ಸೀತಾಮಾತೆ ಯನ್ನು ಭೂಮಿ ತಾಯಿಯ ಮಗಳಾಗಿ ಪವಿತ್ರಳೆಂಬ ಭಾವನೆಯಿಂದ ನಂಬಿಕೆಯಿರಿಸಿಕೊಂಡಿರುತ್ತಾರೆ. == ವೈಜ್ನಾನಿಕವಾಗಿ ಭೂಮಿಯ ಪವಿತ್ರತೆ:-⏎ == ಲಭ್ಯವಿರುವ ಪುರಾವೆಗಳನ್ನು ಆಧರಿಸಿ, ಗ್ರಹದ ವೈಜ್ಞಾನಿಕ ಇತಿಹಾಸವನ್ನು ವಿಜ್ಞಾನಿಗಳು ಮರುರೂಪಿಸಿದ್ದಾರೆ. ಸುಮಾರು ೪೬೦ ಕೋಟಿ ವರ್ಷಗಳ ಹಿಂದೆ, ಸೂರ್ಯ ಮತ್ತು ಬೇರೆ ಗ್ರಹಗಳ ಜೊತೆಯಲ್ಲೇ ಭೂಮಿಯು solar nebula ನೀಹಾರಿಕೆಯಿಂದ ಉದ್ಭವವಾಯಿತು. ಭೂಮಿಯು ಪ್ರಸ್ತುತದ ಅರ್ಧ ವ್ಯಾಸವನ್ನು ಹೊಂದಿದ್ದಾಗ ವಾಯುಮಂಡಲದಲ್ಲಿ ನಿಧಾನವಾಗಿ ನೀರು ಮತ್ತು ನೀರಾವಿಗಳು ಶೇಖರವಾಗತೊಡಗಿದವು. (contracted; show full)ಗೆ ಇಂಥಹ ಕಷ್ಟಗಳನ್ನು ಎದುರಿಸಬೇಕಾಗಿಬರಬಹುದು,ನೀರಿನ ಸಮಸ್ಯೆಯಿಂದ ಜನತೆ ತತ್ತರಗೊಳ್ಳಬಹುದು.ಇದಕ್ಕಾಗಿ ಭೂಮಿಯಲ್ಲಿನ ಅಂತರ್ಜಲ ಖಾಲಿಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸರಕಾರ ಹಾಗೂ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಇದೆ, ನೀರು ಮಳೆಗಾಲದಲ್ಲಿ ಹರಿದು ಅನಾವಶ್ಯಕವಾಗಿ ಸರಾಗವಾಗಿ ಸಮುದ್ರವನ್ನು ಸೇರುವುದನ್ನು ತಡೆದು ಭೂಮಿಯ ಅಂತರ್ಜಲ(ಒಸರು) ಬತ್ತಿ ಹೋಗದಂತೆ ತಡೆಯುವ ಸಲುವಾಗಿ ಅಲ್ಲಲ್ಲಿ ಇಂಗು ಗುಂಡಿಗಳ ರಚನೆ, ಹೊಸ ಹೊಸ ಹಳ್ಳ, ತೋಡು, ಕೆರೆಗಳ ರಚನೆಯಿಂದ ಮಳೆಗಾಲದ ನೀರನ್ನು ರಕ್ಷಿಸಿ ಶೇಕರಿಸಿಡುವುದು,ಸಣ್ಣ ಹಾಗೂ ಮದ್ಯಮ ಪ್ರಮಾಣದ ಜಲಾಶಯ,ಅಣೆಕಟ್ಟುಗಳ ನಿರ್ಮಾಣ ಇವುಗಳ ಪಾತ್ರ ಮಹತ್ತರವಾಗಿದೆ ಮಾತ್ರವಲ್ಲ ಅನಿವಾರ್ಯವೂ ಆಗಲಿದೆ. == ಭೂಮಿಯ ಪವಿತ್ರತೆಯಲ್ಲಿ ಪಂಚಭೂತಗಳಲ್ಲೊಂದಾದ ಗಾಳಿ(ವಾಯು)ಯ ಪಾತ್ರ :- == ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿ(contracted; show full) ವಾಸ್ತು ಶಾಸ್ತ್ರದಲ್ಲಿ ಜಲ ಸ್ಥಾನವನ್ನು ಪುತ್ರನ ಸ್ಥಾನ ಎನ್ನುತ್ತಾರೆ. ಪೂರ್ವ ಜನ್ಮಪುಣ್ಯಸ್ಥಾನ ಸಹಾಯವಿಲ್ಲದೆ, ಪುತ್ರಸ್ಥಾನದ ಯೋಗ ಸಿಗುವುದಿಲ್ಲ. ಈ ಸ್ಥಾನಕ್ಕೆ ಜಠರ ಅಗ್ನಿಯ ಸ್ಥಾನವೆನ್ನುತ್ತಾರೆ. ಸೂರ್ಯ ಗ್ರಹವು ಶ್ರೀಸಾಮಾನ್ಯನಿಗೆ ಆರೋಗ್ಯವನ್ನು ನೀಡುವ ಗ್ರಹವಾಗಿದೆ, ಆರೋಗ್ಯವಿಲ್ಲದಿದ್ದರೆ ಮನುಷ್ಯನ ವೀರ್ಯ ಬೆಳೆಯುವುದಿಲ್ಲ, ಅಂತೆಯ ಭ-ಚಕ್ರದ ಮೇಷರಾಶಿಯನ್ನು ಧರ್ಮಸ್ಥಾನ, ವೃಷಭರಾಶಿಯನ್ನು ಅರ್ಥಸ್ಥಾನ, ಮಿಥುನ ರಾಶಿಯನ್ನು ಕಾಮಸ್ಥಾನ ಮತ್ತು ಕಟಕರಾಶಿಯನ್ನು ಜಲಸ್ಥಾನವೆಂದು ಕರೆಯುತ್ತಾರೆ. == ಭೂಮಿಯ ಕಂಪನದ ಕಾರಣಗಳು :-⏎ == ಬಹುತೇಕ ಭೂಕಂಪಗಳು ಸಂಭವಿಸುತ್ತವೆಯಾದರೂ, ಮಾನವನ ಚಟುವಟಿಕೆಯೂ ಸಹ ಭೂಕಂಪವನ್ನು ಉಂಟುಮಾಡಬಲ್ಲದು. ಈ ವಿದ್ಯಮಾನಕ್ಕೆ ನಾಲ್ಕು ಪ್ರಮುಖ ಕಾರಣಗಳು ಕೊಡುಗೆಯನ್ನು ನೀಡುತ್ತವೆ. ಅವುಗಳೆಂದರೆ, (1) ಬೃಹತ್ ಅಣೆಕಟ್ಟುಗಳು ಹಾಗೂ (2) ಕಟ್ಟಡಗಳನ್ನು ಕಟ್ಟುವುದು, (3)ಬಾವಿಗಳನ್ನು ಕೊರೆಯುವುದು ಹಾಗೂ ಅವುಗಳಿಗೆ ದ್ರವಪದಾರ್ಥವನ್ನು ಸೇರಿಸುವುದು, ಮತ್ತು (4) ಕಲ್ಲಿದ್ದಲು ಗಣಿಕಾರಿಕೆ ಹಾಗೂ ತೈಲ ನಿಕ್ಷೇಪಗಳಿಗಾಗಿ ಕೊರೆಯುವುದು. (contracted; show full)ಗಿ ಭೂಕಂಪ ಮತ್ತು ಇತರ ವಿಕೋಪಗಳು ಉಂಟಾಗುತ್ತಿದ್ದವು. ಜನರನ್ನು ಶಿಕ್ಷಿಸಲು ಹಾಗೂ ಅವರ ಮೇಲೆ ಭಯವನ್ನು ಹೇರಲು ಆತ ಭೂಕಂಪವನ್ನು ಪ್ರತೀಕಾರದ ರೂಪದಲ್ಲಿಯೂ ಬಳಸಿಕೊಂಡ.[೩೬] ಜಪಾನೀಯರ ಪುರಾಣದಲ್ಲಿ, ನಮಝು (鯰) ಒಂದು ದೈತ್ಯ ಬೆಕ್ಕುಮೀನು ಆಗಿದ್ದು ಅದು ಭೂಕಂಪಗಳನ್ನು ಉಂಟುಮಾಡುತ್ತದೆ.ಭೂಮಿಯ ಅಡಿಯಲ್ಲಿನ ಕೆಸರಿನಲ್ಲಿ ನಮಝು ವಾಸಿಸುತ್ತದೆ. ಒಂದು ಕಲ್ಲನ್ನಿಟ್ಟುಕೊಂಡು ಮೀನನ್ನು ಅಂಕೆಯಲ್ಲಿಡುವ ದೇವರಾದ ಕಶಿಮಾ ಈ ನಮಝುವನ್ನು ರಕ್ಷಿಸುತ್ತದೆ. ಕಶಿಮಾ ತನ್ನ ರಕ್ಷಣಾ ಕಾಪನ್ನು ಕೆಳಗೆ ಬೀಳಿಸಿದಾಗ, ನಮಝು ಹೊಯ್ದಾಡಲು ಅಥವಾ ಬಡಿದಾಡಲು ಪ್ರಾರಂಭಿಸುತ್ತದೆ. ಇದರಿಂದಾಗಿ ಬಿರುಸಾದ ಭೂಕಂಪಗಳು ಸಂಭವಿಸುತ್ತವೆ, ಮುಂತಾದ ನಂಬಿಕೆಗಳಿದ್ದವು. == ಮಹಾಭಾರತದಲ್ಲಿ ಭೂಮಿ ಮತ್ತು ಸೃಷ್ಟಿ:-⏎ == ಮಹಾಭಾರತದ ಈಗಿನ ಕಾವ್ಯವು ಸುಮಾರು ಕ್ರಿಪೂ 4000 ವರ್ಷಗಳ ಹಿಂದೆ ಬರಹರೂಪಕ್ಕೆ ಬಂದಿರಬೇಕೆಂದು ಇತಿಹಾಸಕಾರರು ತೀರ್ಮಾನಿಸಿದ್ದಾರೆ. ಮೂಲಮಹಾಭಾರತ ಪಾಠವು ಸುಮಾರು ಕ್ರಿ ಪೂ. ೮ /೯ ನೇ ಶತಮಾನದಲ್ಲಿ ರಚನೆಯಾಗಿರಬೇಕೆಂದು ಅಭಿಪ್ರಾಯ ಪಡುತ್ತಾರೆ. ಕ್ರಿಶ. ೩೦೦/೪೦೦ ರ ಗುಪ್ತರಕಾಲದಲ್ಲಿ ಈಗಿನ ತಿದ್ದಿದ ಗ್ರಂಥ ರಚನೆ ಯಾಗಿರಬಹುದೆಂಬುದು ಭಾಷಾತಜ್ಞರ ಅಭಿಪ್ರಾಯ. ಖಗೋಲ ವಿಜ್ಞಾನಿ ಆರ್ಯಭಟ್ಟರು (ಕ್ರಿ ಶ.೬ ನೇ ಶತಮಾನ) ಕಲಿಯುಗಾದಿಯನ್ನು ಕ್ರಿ.ಪೂ. ೩೧೦೨ ಫೆಬ್ರವರಿ ೧೮ ಎಂದು ನಿರ್ಧರಿಸಿದ್ದಾರೆ ಮಹಾಭಾರತಯುದ್ಧವು ಅದಕ್ಕಿಂತ ೫೦/೬೦ವರ್ಷಹಿಂದೆ ಆಗಿರಬೇಕು. ೨ನೇ ಪುಲಕೇಶಿಯ ಕಾಲದ ಐಹೊಳೆ ಶಾಸನದಲ್ಲಿ ಶಕ ೫೫೬= ಕಿಪೂ.೬೩೪ ಎಂದರೆ ಭಾರತ (ಕುರುಕ್ಷೇತ್ರ ಯುದ್ಧವು) ನಡೆದು ೩೭೩೫ ವರ್ಷಗಳಾದವೆಂದು ಹೇಳಿದೆ. ಖಗೋಲ ಶಾಸ್ರಜ್ಞರ ವೃದ್ಧ ವರ್ಗ, ವರಾಹಮಿಹಿರರು ಮತ್ತು ಹಿಂದಿನ ಇತಿಹಾಸ ಕಾರ ಕಲ್ಹಣ ರು ಆ ಯುದ್ಧವು ಕ್ರಿ ಪೂ ೨೪೪೯ ವರ್ಷದಲ್ಲಿ (೨೪೪೯+೨೦೧೨ = ೪೪೬೧ ವರ್ಷದ ಹಿಂದೆ) ಆಯಿತೆಂದು ಹೇಳುತ್ತಾರೆ. ಆದರೆ ಈಗಿನ ಇತಿಹಾಸ ಕಾರರು ಮಹಾಭಾರತ ಯುದ್ಧವು ಕ್ರಿ ಪೂ.೧೨ ನೇ ಶತಮಾನ ದಿಂದ ಕ್ರಿ ಪೂ. ೮ ನೇ ಶತಮಾನದ ನಡುವೆ ಕಬ್ಬಿಣ ಯುಗದ ಆರಂಭದಲ್ಲಿ ನಡೆದಿರಬೇಕೆಂದು ಅಭಿಪ್ರಾಯ ಪಡುತ್ತಾರೆ. (ವಿಕಿಪೀಡಿಯಾ ಇಂಗ್ಲಿಷ್- ಮಹಾಭಾರತ) ಹಿಂದೂ ಪಂಚಾಂಗಗಳ ಪ್ರಕಾರ ಕಲಿಯುಗ ಆರಂಭವಾಗಿ ೫೧೦೦ ವರ್ಷ ವಾಗಿದೆ ಪ್ರಸಿದ್ಧವಾದ ೧೮ ಪುರಾಣಗಳು ಮಹಾಭಾರತ ಕಾವ್ಯ ಅಥವಾ [[ಇತಿಹಾಸ]]ಕ್ಕಿಂತ ಈಚೆಗೆ ರಚನೆಯಾದದ್ದೆಂದು ಇತಿಹಾಸಕಾರರ ಅಭಿಪ್ರಾಯ. ಕಾಲ ಗಣನೆ ಕಾಲ ೧೯೭,೨೬,೪೯,೧೧೦ ವರ್ಷಗಳ ಹಿಂದೆ (೨೦೦೯ ಕ್ಕೆ) ೧ ನೇ ಸ್ವಾಯಂಭೂ ಮನುವಿನ ಕಾಲ ? ದೇವಗಣ ಸೃಷ್ಟಿ (ಮಹಾಭಾರತ ಆದಿಪರ್ವ ಅದ್ಯಾಯ ೬೫ ಶ್ಲೋಕ ೨೫೭೪/೧೦) ರಿಂದ) ಕಲ್ಪ ಆದಿ ಗತ:೧೯೭,೨೬,೪೯,೧೧೦ (ವರ್ಷಗಳ ಹಿಂದೆ)ಕಲಿ ಗತ ೫೧೧೦ವರ್ಷ (೨೦೦೯ಕ್ಕೆ) ಸೃಷ್ಟಿಯ ಆದಿ ಗತ:೧೯೫,೫೮,೮೫೨೧೦,; ವವಸ್ವತ ಮನು ಗತ : ೧,೮೬,೧೮,೮೫೦ (ಮೈಸೂರು ಪಂಚಾಂಗ ರೀತ್ಯಾ). ಇದು ಬ್ರಹ್ಮನ ದ್ವಿತೀಯ ಪರಾರ್ಧ (ಮಧ್ಯಾಹ್ನ ) ಶ್ವೇತ ವರಾಹ ಕಲ್ಪ ( ಅನೇಕ ಯುಗಗಳು ಮತ್ತು ಮನ್ವಂತರಗಳು) ಈಗ ವೈವಸ್ವತ ಮನ್ವಂತರ. == ಭೂಮಿಯ ಪವಿತ್ರತೆಯಲ್ಲಿ ನೀರು,ಜಲ ಮಾಲಿನ್ಯ ಮತ್ತು ಜಲ ಸಂರಕ್ಷಣೆ :-⏎ == ಭೂಮಿಯ ಹೊರತಲದಲ್ಲಿ ಅತ್ಯಂತ ಹೇರಳವಾಗಿ ಸಿಗುವ ಅಣು ನೀರು (H 2O), ಇದು ಗ್ರಹದ 70% ಭಾಗದಲ್ಲಿ ಸಂಯೋಜನೆಗೊಂಡಿದೆ. ನಿಸರ್ಗದಲ್ಲಿ ಇದು ದ್ರವ, ಘನ, ಮತ್ತು ಅನಿಲ ರೂಪದಲ್ಲಿ ಅಸ್ತಿತ್ವದಲ್ಲಿದೆ. ಉಷ್ಣಾಂಶ ಮತ್ತು ಒತ್ತಡ ಪ್ರಮಾಣದಲ್ಲಿ ದ್ರವ ಮತ್ತು ಅನಿಲಗಳ ನಡುವೆ ಪ್ರೇರಕ ಸಮತೋಲನವಾಗಿ ಇರುತ್ತದೆ. ಕೊಠಡಿ ತಾಪಮಾನದಲ್ಲಿ, ಅದು ವರ್ಣರಹಿತವಾಗಿರುತ್ತದೆ ಜೊತೆಗೆ ನೀಲಿ ಬಣ್ಣದ ಸುಳಿವು ಹಿಂದಿದ್ದು ರುಚಿಹೀನವಾಗಿಯೂ ಮತ್ತು ವಾಸನಾರಹಿತವಾಗಿಯೂ ಇರುವ ದ್ರವಾಗಿದೆ. ಅನೇಕ ವಸ್ತುಗಳು ನೀರಿನಲ್ಲಿ ಕರಗುತ್ತವೆ ಮತ್ತು ಸಾಮಾನ್ಯವಾಗಿ ನೀರನ್ನು ವಿಶ್ವವ್ಯಾಪಿ ದ್ರವೀಕರಣ ಮಾಡುವ ಗುಣವುಳ್ಳದ್ದು ಎಂದು ಉಲ್ಲೇಖಿಸಲಾಗುತ್ತದೆ. ಈ ಕಾರಣದಿಂದಲೇ ಪ್ರಕೃತಿಯಲ್ಲಿ ಮತ್ತು ಬಳಕೆಯಲ್ಲಿ ನೀರು ಅಶುದ್ಧವೆನ್ನಲಾಗಿದೆ ಮತ್ತು ಶುದ್ಧ ವಸ್ತುಗಳ ಶುದ್ಧತೆಯೂ ಕೂಡ ಒಂದಿಷ್ಟು ವ್ಯತ್ಯಾಸಗೊಳ್ಳುತ್ತದೆ. ಏನೇ ಆಗಲಿ, ಪೂರ್ಣವಾಗಿ ಅಲ್ಲದಿದ್ದರೂ ಕೆಲವು ಸಂಯೋಗಗಳು ಅಗತ್ಯವಾಗಿದೆ, ಇಲ್ಲದಿದ್ದಲ್ಲಿ ನೀರಲ್ಲಿ ಕರಗುವುದಿಲ್ಲ. ನೀರು ಎಂಬುದೊಂದೇ ನೈಸರ್ಗಿಕವಾಗಿ ಎಲ್ಲಾ ಮೂರು ಸಾಮಾನ್ಯವಾದ ಭೌತದ್ರವ್ಯದ ಸ್ಥಿತಿ-ಯಲ್ಲಿ ಕಂಡು ಬರುವುದು, ಬೇರೆ ರೀತಿಯಲ್ಲಿ ಕಾಣುವುದಕ್ಕಾಗಿ ರಾಸಾಯನಿಕ ಗುಣಲಕ್ಷಣಗಳು ನೋಡಬೇಕಾಗುತ್ತದೆ. ಭೂಮಿಯ ಮೇಲೆ ಜೀವಿಸುವುದಕ್ಕೆ ನೀರು ಅತ್ಯಂತ ಅಗತ್ಯ.ಮನುಷ್ಯನ ಶರೀರದಲ್ಲಿ 55% ರಿಂದ 78% ರಷ್ಟು ನೀರು ತುಂಬಿರುತ್ತದೆ. All content in the above text box is licensed under the Creative Commons Attribution-ShareAlike license Version 4 and was originally sourced from https://kn.wikipedia.org/w/index.php?diff=prev&oldid=856096.
![]() ![]() This site is not affiliated with or endorsed in any way by the Wikimedia Foundation or any of its affiliates. In fact, we fucking despise them.
|