Revision 1065299 of "ಸುಭಾಷಿತಗಳು" on knwiki[[File:Sacred lotus Nelumbo nucifera.jpg|thumb|ಪವಿತ್ರ ಕಮಲ ಪುಷ್ಪ (Nelumbo nucifera)]]
==ಒಳ್ಳೆಯ ಮಾತು==
*ಚೆನ್ನಾಗಿ ಆಡಿದ ಮಾತಿಗೆ ಸಂಸ್ಕೃತದಲ್ಲಿ ‘ಸುಭಾಷಿತ’ ಎನ್ನುತ್ತಾರೆ (ಸು:ಚೆನ್ನಾಗಿ, ಭಾಷಿತ:ಹೇಳಿದ್ದು). ‘ಚೆನ್ನಾಗಿ’ ಎಂದರೆ ಕೇಳುವುದಕ್ಕೆ ಇಂಪಾಗಿಯೋ, ಸುಂದರವಾದ ಪದಗಳನ್ನು ಪೋಣಿಸಿರುವುದೋ ಅಥವಾ ಆಕರ್ಷಕವಾಗಿಯೋ ಆಡಿದ್ದು. ಮತ್ತು ಬದುಕನ್ನು ಸಾರವನ್ನು ಸುಂದರವಾಗಿ, ಅರ್ಥಪೂರ್ಣವಾಗಿ ನೋಡಿ ಹೇಳಿದ ವಿವೇಕದ ವಚನ.
*ಹೀಗಾಗಿಯೇ ಸಂಸ್ಕೃತದಲ್ಲಿ ‘ಸುಭಾಷಿತ’ ಎಂಬ ವಿಶಿಷ್ಟ ಸಾಹಿತ್ಯಪ್ರಕಾರವೇ ಅಪಾರವಾಗಿ ಬೆಳೆದಿದೆ. ಸುಭಾಷಿತಗಳ ಬಗ್ಗೆ ‘ಸುಭಾಷಿತರತ್ನಭಾಂಡಾಗಾರ’ದ ಮಾತೊಂದು ಹೀಗಿದೆ:
::'ಭಾಷಾಸು ಮುಖ್ಯಾ ಮಧುರಾ ದಿವ್ಯಾ ಗೀರ್ವಾಣಭಾರತೀ /
::ತಸ್ಮಾದ್ಧಿ ಕಾವ್ಯಂ ಮಧುರಂ ತಸ್ಮಾದಪಿ ಸುಭಾಷಿತಮ್//
*ಭಾಷೆಯ ಬಗ್ಗೆ ಒಂದು ಸುಭಾಷಿತ; ಭಾಷೆಗಳಲ್ಲಿ ಮುಖ್ಯವೂ ಮಧುರವೂ ದಿವ್ಯವೂ ಆದುದು ಸಂಸ್ಕೃತಭಾಷೆ; ಅದರಿಂದಾಗಿ ಆ ಭಾಷೆಯಲ್ಲಿರುವ ಕಾವ್ಯ ಮಧರವಾಗಿದೆ; ಅದಕ್ಕಿಂತಲೂ ಸುಭಾಷಿತ ಇನ್ನೂ ಮಧುರ’ ಎನ್ನುವುದು ಈ ಶ್ಲೋಕದ ಭಾವ.
*ನಮ್ಮ ಜೀವನವು ಮಾತನ್ನು ಆವಲಂಬಿಸಿಕೊಂಡಿದೆ; ನಮ್ಮ ಜೀವನ ಮಾತಿಲ್ಲದೆ ನಡೆಯದು. ನಮ್ಮ ಜೀವನದ ಸೊಗಸಿಗೂ, ಸುಖಕ್ಕೂ, ನೋವಿಗೂ ನಾವಾಡುವ ಮಾತು ಕಾರಣವಾಗಿರುತ್ತದೆ.
==ಸುಭಾಷಿತದ ವ್ಯಾಖ್ಯೆ==
[[File:കദംബം.JPG|260px|right |thumb|ಸುಗಂಧರಾಜ (Genus-[[:en:Polianthes|Polianthes]]--]]
*ನಾವಾಡುವ ಮಾತು ನಮ್ಮ ಬದುಕಿಗೆ ಪೂರಕವಾಗಿ ಒದಗಬೇಕು; ಬದುಕಿನ ಆಳವನ್ನೂ ವಿಸ್ತಾರವನ್ನೂ ಅದು ತೋರಿಸುವಂತಿರಬೇಕು; ನಮ್ಮ ಹಿತವನ್ನೂ ಅಹಿತವನ್ನೂ ಪ್ರಕಟಿಸುವಂತಿರಬೇಕು; ಇಷ್ಟೆಲ್ಲ ಇದ್ದರೂ ಆ ಮಾತು ಕೇಳಲು ಸಿಹಿಯಾಗಿರಲೂ ಬೇಕು. ಇಷ್ಟು ಗುಣಗಳನ್ನೂ ಒಳಗೊಂಡಿರುವುದೇ ‘ಸುಭಾಷಿತ’. ಇದನ್ನೇ ಸುಭಾಷಿತವೊಂದು ತನ್ನ ಬಗ್ಗೆ ತಾನೇ ಹೀಗೆ ಹೇಳಿಕೊಂಡಿದೆ:
::ದ್ರಾಕ್ಷಾಮ್ಲಾನಾಮುಖೀ ಜಾತಾ ಶರ್ಕಾರಾ ಚಾಶ್ಮತಾಂ ಗತಾ/
::ಸುಭಾಷಿತರಸಸ್ಯಾಗ್ರೇ ಸುಧಾ ಭೀತಾ ದಿವಂ ಗತಾ//
*"ಸುಭಾಷಿತದ ರುಚಿಯ ಮುಂದೆ ದ್ರಾಕ್ಷಿಯೂ ಬಾಡಿಹೋಯಿತು(ಸಪ್ಪೆಯಾಯಿತು); ಸಕ್ಕರೆ ಕಲ್ಲಾಗಿಹೋಯಿತು (ರುಚಿಇಲ್ಲದ್ದು). ಅಮೃತವು ಹೆದರಿ ಸ್ವರ್ಗಕ್ಕೆ ಓಡಿಹೋಯಿತು!’
==ಸುಭಾಷಿತದ ಶ್ರೇಷ್ಠತೆ==
*ಸುಭಾಷಿತಗಳ ಸಂಗ್ರಹದಿಂದ ನಮ್ಮ ಜೀವನದೃಷ್ಟಿ ವಿಶಾಲವಾಗುವುದು; ಜೀವನದ ಎಷ್ಟೋ ಸಂದರ್ಭಗಳ ಗುಣಾವಗುಣಗಳನ್ನು ಸ್ಪಷ್ಟವಾಗಿ ವಿಮರ್ಶಿಸಲು ನೆರವಾಗುತ್ತವೆ; ಅದನ್ನೇ ಸುಭಾಷಿತವೊಂದು ಹೀಗೆಂದಿದೆ:
::ಪೃಥಿವ್ಯಾಂ ತ್ರೀಣಿ ರತ್ನಾನಿ ಜಲಮನ್ನಂ ಸುಭಾಷಿತಂ/
::ಮೂಢೈಃ ಪಾಷಾಣಖಂಡೇಷು ರತ್ನಸಂಜ್ಞಾ ವಿಧೀಯತೇ//
*‘ಭೂಮಿಯಲ್ಲಿ ಶ್ರೇಷ್ಠವಸ್ತುಗಳೆಂದರೆ ಕೇವಲ ಮೂರು: ನೀರು, ಅನ್ನ ಮತ್ತು ಒಳ್ಳೆಯ ಮಾತು. ಆದರೆ ಮೂರ್ಖರು ಕಲ್ಲಿನ ಚೂರುಗಳನ್ನು ‘‘ರತ್ನ ’’ಎಂದು ಕರೆಯುತ್ತಿರುವುದು ವಿಷಾದಕರ.’<ref>{{Cite web |url=http://www.prajavani.net/news/article/2016/11/30/455453.html |title=ಸುಭಾಷಿತ ಬದುಕಿಗೆ ಒದಗುವ ಮಧುರ ಮಾತು;30 Nov, 2016 |access-date=2016-11-30 |archive-date=2016-11-30 |archive-url=https://web.archive.org/web/20161130154006/http://www.prajavani.net/news/article/2016/11/30/455453.html |url-status=dead }}</ref>
==ಧರ್ಮದ ಬಗೆಗೆ ಸುಭಾಷಿತ==
::ಸತ್ಯಂ ಬ್ರೂಯಾತ ಪ್ರಿಯಂ ಬ್ರೂಯಾತ್|
:::ನಬ್ರೂಯಾತ್ ಸತ್ಯಮಪ್ರಿಯಂ||
::ಪ್ರಿಯಂ ಚ ನಾSನೃತಂ ಬ್ರೂಯಾತ್|
:::ಏಷ ಧರ್ಮಃ ಸನಾತನಃ ||
*ಸತ್ಯವನ್ನು ನುಡಿಯಬೇಕು, ಪ್ರಿಯವಾದ ಸತ್ಯವನ್ನು ಹೇಳಬೇಕು. ಅಪ್ರಿಯವಾದ, ಎಂದರೆ ಪರರ ಮನಸ್ಸಿಗೆ ಅಥವಾ ಪರರಿಗೆ ಕೆಡುಕಾಗಬಹುದಾದ ನೋವುಂಟು ಮಾಡುವ ಸತ್ಯವನ್ನು ಹೇಳಬೇಡ. ಬೇರೆಯವರಿಗೆ ಅಥವಾ ಇತರರಿಗೆ ಸಂತೋಷವಾಗುವುದೆಂದು ಅಥವಾ ಅನುಕೂಲವಾಗುವುದೆಂದು ಸುಳ್ಳನ್ನು ನುಡಿಯಬೇಡ. ಇದೇ ಸನಾತನವಾದ ಶಾಶ್ವತವಾದ ಬಹುಕಾಲದಿಂದ ಒಪ್ಪಿತವಾದ ಧರ್ಮ. <ref>ಸನಾತನಧರ್ಮ ಗ್ರಂಥ-ಕಿರುಹೊತ್ತಿಗೆ ಲೇಖಕ:ಅನಾಮಿಕ </ref>
==ವೇದವ್ಯಾಸರ ಧರ್ಮ ಸೂತ್ರ==
[[Image:Vyasa.jpg|frame|ವೇದ ವ್ಯಾಸ''(ಸಮಕಾಲೀನ ಚಿತ್ರ)]]
:1) ಶ್ಲೋಕಾರ್ಧೇನ ಪ್ರವಕ್ಷಾಮಿ,
:ಯದುಕ್ತಂ ಗ್ರಂಥಕೋಟಿಭಿಃ |
:ಪರೋಪಕಾರಃ ಪುಣ್ಯಾಯ,
:ಪಾಪಾಯ ಪರಪೀಡನಂ ||
*ಯಾರೋ ಒಬ್ಬ ಶಿಷ್ಯನು ವ್ಯಾಸರನ್ನು ಕುರಿತು, 18 ಪುರಾಣಗಳನ್ನೂ, ಶ್ರುತಿ ಸ್ಮøತಿಗಳನ್ನೆಲ್ಲಾ ಓದಿ ಧರ್ಮ ಸೂಕ್ಷ್ಮವನ್ನು ತಿಳಿಯುವುದು ಅಸಾಧ್ಯವೆಂದಾಗ, (ಒಂದೇ) ಅರ್ಧ ಶ್ಲೋಕದಲ್ಲಿ ಅವುಗಳೆಲ್ಲದರ ಸಾರಾಂಶವನ್ನೂ, ಧರ್ಮದ ಸಾರವನ್ನೂ ತಿಳಿಸುತ್ತೇನೆಂದು ಈ ಶ್ಲೋಕವನ್ನು ಹೇಳಿದರೆಂದು ಪ್ರತೀತಿ.
‘ಅರ್ಧ ಶ್ಲೋಕದಲ್ಲಿ ಕೋಟಿಗ್ರಂಥದಲ್ಲಿ ಹೇಳಿದುದನ್ನು ಹೇಳುತ್ತೇನೆ; '''ಪರೋಪಕಾರವೇ ಪುಣ್ಯ, ಪರ ಪೀಡನೆಯೇ ಪಾಪ’'''.
:2) ಶ್ರೂಯತಾಂ ಧರ್ಮ ಸರ್ವಸ್ವಂ,
:ಶ್ರುತ್ವಾಚ ಅವಧಾರ್ಯತಾಮ್ |
:ಆತ್ಮನಃ ಪ್ರತಿಕೂಲಾನಿ
:ನ ಪರೇಷಾಂ ಸಮಾಚರೇತ್ ||
*ಎಲ್ಲಾ ಧರ್ಮ ಶಾಸ್ತ್ರ ಗಳನ್ನು ಓದಿದ್ದರೂ, ತಿಳಿದಿದ್ದರೂ, (ಕೇಳಿದ್ದರೂ, ಅದರಲ್ಲಿ ಏನೇ ಹೇಳಿದ್ದರೂ), ತನಗೂ, ಬೇರೆಯವರಿಗೂ ಕೆಡುಕಾಗವ ಕಾರ್ಯವನ್ನು ಮಾಡಬಾರದು. ಅಥವಾ ತನಗೆ ಯಾವುದು ಪ್ರತಿಕೂಲವೋ ಅಂಥದನ್ನು ಬೇರೆಯವರಿಗೆ-ಪರರಿಗೂ ಪ್ರತಿಕೂಲವೆಂದು ಅರಿತು, ಮಾಡಬಾರದು
<ref>ಸುಭಾಷಿತಗಳು - ಚಂದಮಾಮ</ref>
==ವ್ಯಾಸಭಾರತದ ಪ್ರತಿಜ್ಞೆ==
** ಮಹಾಭಾರತದ ಆದಿಪರ್ವದ ಅಂಶಾವತರಣ ಪರ್ವವಾದ 62ನೆಯ ಅಧ್ಯಾಯದಲ್ಲಿ ಶ್ರೀ ಮಹಾಭಾರತದ ಪ್ರಶಂಸೆಂಯು ಬರುವುದು. ಆದರಲ್ಲಿ ವೈಶಂಪಾಯನ ಮುನಿಗಳು ಜನಮೇಜಯ ಮಹಾರಾಜನಿಗೆ ಮಹಾಭಾರತದ ಗುಣವರ್ಣನೆ ಮಾಡುತ್ತಾ, ಶ್ರೀ ಕೃಷ್ಣ ದ್ವೈಪಾಯನ ಮುನಿಯು ಅದ್ಭುತವಾದ ಈ ಮಹಾಭಾರತ ವ್ಯಾಖ್ಯಾನವನ್ನು ಮೂರವರ್ಷಗಳಲ್ಲಿ ರಚಿಸಿದನೆಂದು ಹೇಳಿದರು.
ವೈಶಂಪಾಯನ ಮುನಿ ಮಾಡಿದ ಕೊನಯ ಪ್ರಶಂಸೆಯು ಈರೀತಿ ಇದೆ:
::ಧರ್ಮೇ-ಚಾರ್ಥೇ ಚ ಕಾಮೇ ಚ ಮೋಕ್ಷೇ ಚ ಭರತರ್ಷಭ |
::ಯಧಿಹಾಸ್ತಿ ತದನ್ಯತ್ರ ಯನ್ನೇಹಾಸ್ತಿ ನ ತತ್ ಕ್ವಚಿತ್ ||64||
*ಭರತಶ್ರೇಷ್ಠನೇ, ಧರ್ಮ, ಅರ್ಥ, ಕಾಮ ಮತು ಮೋಕ್ಷಗಳಿಗೆ ಸಂಬಂಧಿಸಿದ ಯಾವದೇ ವಿಷಯವು ಇದರಲ್ಲಿದ್ದರೆ ಮಾತ್ರ ಅದು ಬೇರೆ ಗ್ರಂಥಗಳಲ್ಲಿ ಸಿಗಬಹುದು. ಆದರೆ ಇದರಲ್ಲಿ ಯಾವುದು ಇಲ್ಲವೋ ಅದು ಬೇರೆಲ್ಲಿಯೂ ಸಿಗಲಾರದು. (ಮಹಾಭಾರತದ ಬಗ್ಗೆ ಈ ಶ್ಲೋಕವು ಬಹಳ ಪ್ರಸಿದ್ಧವಾಗಿದೆ)<ref>ಮಹಾಭಾರತದ ಆದಿಪರ್ವದ ಅಂಶಾವತರಣ ಪರ್ವವಾದ 62ನೆಯ ಅಧ್ಯಾಯ(ಶ್ಲೋಕ : 2379)</ref>
==ವಿದ್ಯೆಯಿಂದ ಸುಖ==
::ವಿದ್ಯಾ ದಧಾತಿ ವಿನಯಂ, ವಿನಯಾದ್ಯಾತಿ ಪಾತ್ರತಾಂ|
::ಪಾತ್ರತ್ವಾ ಧನಮಾಪ್ನೋತಿ, ಧನದ್ಧರ್ಮಂ ತತಃ ಸುಖಂ||
*ವಿದ್ಯೆಯಿಂದ ವಿನಯಗುಣವು ಬರುವುದು. ವಿನಯಗುಣದಿಂದ ಸಮಾಜದಲ್ಲಿ ಯೋಗ್ಯತೆ, ಗೌರವ ಸಿಗುವುದು. ಅದರಿಂದ ಸಂಪತ್ತು ಗಳಿಕೆಯಾಗುವುದು. ಸಂಪತ್ತಿನಿಂದ ಪ್ರಾಪಂಚಿಕ ಸುಖ ಸಿಗುವುದು. <ref>संस्कृत सुभाषितानि - ०५ ಗೀತಾಪ್ರೆಸ್</ref>
==ನೋಡಿ==
*[[ಗಾದೆಗಳು]]
==ಉಲ್ಲೇಖ==
{{Reflist|2}}
[[ವರ್ಗ:ಸಾಹಿತ್ಯ]]
[[ವರ್ಗ:ಜಾನಪದ]]All content in the above text box is licensed under the Creative Commons Attribution-ShareAlike license Version 4 and was originally sourced from https://kn.wikipedia.org/w/index.php?oldid=1065299.
![]() ![]() This site is not affiliated with or endorsed in any way by the Wikimedia Foundation or any of its affiliates. In fact, we fucking despise them.
|